ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಅಯೋಧ್ಯೆ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ ಸಂಕಲ್ಪ ಹೊಂದಲಾಗಿದೆ.
ಈ ಸಂಕಲ್ಪದಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಂದು ದಿನಾಂಕ 02.01.2024 ರಂದು ಶಿರೂರಿನ ಆಲಂದೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ, ಆಲಂದೂರು ಭಾಗದ ಮನೆ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.



