ಬೈಂದೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ( ಪಿಎಂಎಂವೈ ) ಯಡಿ ಸಂಸದರಾದ ಬಿ ವೈ ರಾಘವೇಂದ್ರ ರವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ 22.18 ಕೋ. ರೂ. ಮೊತ್ತಕ್ಕೆ ಕೇಂದ್ರ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು. ಶೇ 60:40 ಅನುಪಾತದಲ್ಲಿ ಈ ಯೋಜನೆ ಅನುಷ್ಠಾನ ಗೊಳ್ಳಲಿದ್ದು ರಾಜ್ಯದ ಪಾಲಿನ ಅನುದಾನ ಬಿಡುಗಡೆ ಬಾಕಿ ಇರುವುದರಿಂದ ಈ ಕೂಡಲೇ ಸದರಿ ಮೊತ್ತವನ್ನು ಬಿಡುಗಡೆ ಗೊಳಿಸಿ ಬಂದರಿನ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಬಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರಿಕೆ ಸಚಿವೆ ಮಾಂಕಾಳ ವೈದ್ಯ ಅವರನ್ನು ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮಂಜೂರಾದ ಮೊತ್ತಕ್ಕೆ ರಾಜ್ಯ ಸರಕಾರದ ಆಡಳಿತ ಮಂಜೂರಾತಿ ಬಾಕಿ ಇದೆ ಎಂದು ಸಚಿವ ಮಾಂಕಾಳ್ ವೈದ್ಯ ಅವರು ತಿಳಿಸಿದ್ದಾರೆ.
ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ ಮಂಜೂರಾದ ಮೊತ್ತವನ್ನು ಕೂಡಲೇ ವಿನಿಯೋಗಿಸಲು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರ ಚುಕ್ಕೆ ಗುರುತಿಲ್ಲದ ಪ್ರಶ್ನೆ ಗೆ ಬೆಳಗಾವಿ ಅಧಿವೇಶನದಲ್ಲಿ ಸಚಿವರು ಉತ್ತರಿಸಿದ್ದಾರೆ.