ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದಕ್ಕೆ ಎಣ್ಣೆ: ಇದ್ಯಾವ ಸೀಮೆ ನ್ಯಾಯ ?!

‘ಕ್ರೈಸ್’ನಿಂದ ಬೇರ್ಪಟ್ಟು, 2015-16ರಲ್ಲಿ ಅಲ್ಪಸಂಖ್ಯಾತ ವಸತಿಶಾಲೆಗಳಿಗೆ ಪ್ರತ್ಯೇಕ ನಿರ್ದೇಶನಾಲಯ ರಚನೆಯಾಗಿದೆ. ಆದರೆ, ಇದೇ ‘ಕ್ರೈಸ್’ ಅಡಿಯಲ್ಲಿ ದಶಕಗಳಿಂದ ಪಾಠ ಮಾಡುತ್ತಿರುವ ಎಸ್‌ಸಿ, ಎಸ್‌ಟಿ, ಒಬಿಸಿ ಇಲಾಖೆಗಳಿಗೆ ಸೇರಿದ ಉಪನ್ಯಾಸಕರನ್ನು ಮಾತ್ರ ಇನ್ನಿಲ್ಲ ದಂತೆ ಕಡೆಗಣಿಸಲಾಗುತ್ತಿದೆ. ‘ಶಿಕ್ಷಣ ದಲ್ಲಿ ಭೇದಭಾವ ತೋರಬಾರದು ಎಂಬುದನ್ನು ನಮ್ಮ ಸಂವಿಧಾನವೇ ಹೇಳಿದೆ’ ಎಂದು ನಮಗೇ ತಿಳಿಸಿ ಹೇಳುವಂಥ ಶಿಕ್ಷಕರಿಗೇ ಭೇದಭಾವ ಮಾಡುವುದು ಸರಿಯೇ? ರಾಜೇಶ ಮತ್ತು ರಮೇಶ ಇಬ್ಬರೂ ಅಣ್ಣ-ತಮ್ಮಂದಿರು ಇರುತ್ತಾರೆ. ಇಬ್ಬರೂ ಒಂದೇ ವಿದ್ಯಾರ್ಹತೆ ಹೊಂದಿದ್ದು, ಸರಕಾರಿ ಇಲಾಖೆ ಅಡಿಯಲ್ಲಿ ನೌಕರಿಗೆ

Read More

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಘೋಷ್‌ ಶಂಖನಾದ

ಸಮಸ್ತ ಮಾನವಜಾತಿಯ ಕಲ್ಯಾಣದ ಉದ್ದೇಶವನ್ನಿಟ್ಟುಕೊಂಡು ಸ್ಥಾಪಿತವಾದ ಸನಾತನ ಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ ಮೇ 17ರಿಂದ 19ರವರೆಗೆ ಐಐಟಿ ಗೋವಾ ಕ್ಯಾಂಪಸ್ ನಲ್ಲಿ ನಡೆದ ‘ಸನಾತನ ರಾಷ್ಟ್ರ ಶಂಖನಾದ’ ಎಂಬ ಕಾರ್ಯಕ್ರಮವನ್ನು ಡಾ.ಜಯಂತ ಬಾಳಾಜಿ ಅಠವಲೆಯವರ 83ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ಜಗತ್ತಿನ ಯಾವುದೇ ಮೂಲೆಯಲ್ಲಿ ಇರುವ, ಹಿಂದೂ ದಂಪತಿಗಳಿಗೆ ಹುಟ್ಟುವ ಮಗು, ಜನನವಾದ ಕೂಡಲೇ ಭಾರತ ದೇಶದ ನಾಗರಿಕನಾಗುತ್ತಾನೆ, ಹಿಂದೂ ಎಂದು ಪರಿಗಣಿಸಲ್ಪಡುತ್ತಾನೆ ಎಂಬ ಕಾನೂನು ತರಬೇಕು ಎನ್ನುತ್ತಾರೆ ಘೋಷ್! ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಘೋಷ್

Read More

ಬೆಳ್ಳಿಹಬ್ಬದ ಸಾರ್ಥಕತೆ ಕಂಡ ಸರಕಾರಿ ಶಿಕ್ಷಣ ಯೋಜನೆ !

ಭಾರತದಲ್ಲಿ ಯೋಜನೆಗಳು ಘೋಷಣೆಯಾಗುವುದು ಸರಕಾರಿ ದಾಖಲೆಗಳಲ್ಲಿ ಇರುವುದಕ್ಕೆ ಮಾತ್ರ ಎಂದು ಜನಸಾಮಾನ್ಯರೂ ಆಡಿಕೊಳ್ಳುವ ಕಾಲದಲ್ಲಿ, ಸದ್ದಿಲ್ಲದೆ ಸಮಾಜದ, ಜನಸಮುದಾಯದ ಜೊತೆಗೆ ಸರಕಾರಿ ಆಡಳಿತ ವಲಯದಲ್ಲೂ ಒಟ್ಟೊಟ್ಟಿಗೆ ಅತ್ಯದ್ಭುತ ಯಶಸ್ಸು ಕಂಡ ಒಂದು ವಿಶಿಷ್ಟ ಶಿಕ್ಷಣ ಯೋಜನೆಯಾಗಿದೆ ಸರ್ವಶಿಕ್ಷಾ ಅಭಿಯಾನ! ಸರ್ವ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಭಾರತ ಸರಕಾರವು ಪ್ರಾರಂಭಿಸಿದ ಪ್ರಮುಖ ಕಾರ್ಯಕ್ರಮ ವಾಗಿದ್ದು, ಭಾರತ ಸಂವಿಧಾನದ ಆಶಯದಂತೆ ಸಮಯಕ್ಕೆ ಅನುಗುಣವಾಗಿ ಪ್ರಾಥಮಿಕ ಶಿಕ್ಷಣದ ಸಾರ್ವತ್ರಿಕರಣವನ್ನು (ಯುಇಇ) ಸಾಧಿಸಲು ಇದನ್ನು ಪ್ರಾರಂಭಿಸಲಾಯಿತು. ಭಾರತದ ಸಂವಿಧಾನದ 86ನೇ ತಿದ್ದುಪಡಿಯು ಶಿಕ್ಷಣದ

Read More

ಲೇಖಕ ರಂಗನಾಥನ್‌ ಅವರು ಎತ್ತಿದ ಮತ್ತಷ್ಟು ಪ್ರಶ್ನೆಗಳು !

ಕಳೆದ ವಾರ ‘ನ್ಯಾಯಾಂಗ v/s ಶಾಸಕಾಂಗ’ ಎಂಬ ಲೇಖನದಲ್ಲಿ ನ್ಯಾಯಾಂಗ ವ್ಯವಸ್ಥೆ ಮತ್ತು ಕೆಲವರ ಮಿಶ್ರ ಅಭಿಪ್ರಾಯಗಳನ್ನು ಸೂಕ್ಷ್ಮವಾಗಿ ತೆರೆದಿಡುವ ಪ್ರಯತ್ನ ಮಾಡಿದ್ದೆವು. ಇದಕ್ಕೆ ಓದುಗರು, ಹಿತೈಷಿ ಗಳು ವೈಯಕ್ತಿಕವಾಗಿ ಕರೆ ಮಾಡಿ, ವಾಸ್ತವ ಕಟ್ಟಿಕೊಡಲು ಯತ್ನಿಸಿದ್ದೀರಿ ಎಂದರಲ್ಲದೆ, ಇನ್ನೊಂದಿಷ್ಟು ವಿಚಾರಗಳ ಕುರಿತು ಬರೆಯುವಂತೆ ಚರ್ಚಿಸಿ ಲೇಖನಕ್ಕೆ ಸಲಹೆ ನೀಡಿದರು. ಆ ಲೇಖನಕ್ಕೆ ಪೂರಕವಾಗಿ, ಚಿಂತಕ, ಲೇಖಕ ಆನಂದ್ ರಂಗನಾಥನ್ ಅವರು ಎತ್ತಿದ ಕೆಲವು ವಿಚಾರಗಳನ್ನು ಲೇಖಕರ ಗಮನಕ್ಕೆ ತಂದು, ಅವುಗಳ ಬಗ್ಗೆ ವಿಶ್ಲೇಷಿಸುವಂತೆ ಒತ್ತಾಯಿಸಿದ ಕಾರಣ,

Read More

ಆಪತ್ಕಾಲದ ನಂಬಿಕೆಯ ಹುಂಡಿ – PM-NRF

ಶಾಸಕರ ಮನೆ, ಕಛೇರಿಯ ಮುಂದೆ ನಿಂತಿರುವ ಜನಸಾಮಾನ್ಯ, ತನ್ನ ಆಪತ್ಕಾಲಕ್ಕೆ, ಅಪಘಾತ ದಂತಹ ಚಿಕಿತ್ಸೆಗೆ ಖಂಡಿತ ಸಹಾಯ ದೊರಕುವುದು ಎಂಬ ನಂಬಿಕೆ ಹೊಂದಿರುತ್ತಾನೆ. ನೂರೆಂಟು ಒತ್ತಡಗಳ ನಡುವೆ ಆ ಜನಪ್ರತಿನಿಧಿಯೂ ಸಹ ಖಂಡಿತವಾಗಿಯೂ ನಿನ್ನ ಸಂಕಷ್ಟ ಸರಿಯಾಗುತ್ತದೆ ಎಂದು ಬೆನ್ನು ತಟ್ಟಿ ಧೈರ್ಯ ಹೇಳುತ್ತಾನೆ. ಹೀಗೆ ಮಾಡುವವರಿಗೂ, ಇದರ ಸಹಾಯ ಪಡೆಯು ವವರಿಗೂ ಒಟ್ಟಿಗೇ ನಂಬಿಕೆ ಮೂಡಿಸಿರುವ ವಿಶಿಷ್ಟ ಯೋಜನೆ ನಮ್ಮ ಪ್ರಧಾನಮಂತ್ರಿ ಪರಿಹಾರನಿಧಿ! ಆರಂಭಿಕ ಕಾಲದಿಂದಲೂ ನಮ್ಮ ಸಮಾಜದಲ್ಲಿ ದೇಗುಲಕ್ಕೆ ಭೇಟಿಕೊಟ್ಟಾಗ ಸಹಜವಾಗಿಯೇ ದಕ್ಷಿಣೆ ರೂಪದಲ್ಲಿ

Read More

ಕೊರಗ ಜನಾಂಗದ ಅಭಿವೃದ್ಧಿಗೆ ಮೋದಿ ಸರಕಾರದ ಕಾಳಜಿ !

ಮಾನವ ಜೀವಸಂಕುಲ ಆರಂಭಗೊಂಡದ್ದು ನಾಗರಿಕತೆಯ ಪೋಷಣೆಯಲ್ಲಿ. ಪ್ರಸ್ತುತ ಜಗತ್ತಿನ ಮೂಲ ನಾಗರಿಕತೆ ಇತಿಹಾಸ ಹೊಂದಿರುವ ಏಳು ದೇಶಗಳು ನಮ್ಮ ಸುತ್ತಮುತ್ತಲಿವೆ. ಇವುಗಳಲ್ಲಿ, ಅತ್ಯಂತ ಪುರಾತನವಾದ ಭಾರತದ ನಾಗರಿಕತೆಯೂ ಒಂದು. ಆದಿಮಾನವನಿಂದ ನಾಗರಿಕ ನಾಗುವತ್ತ ಸಾಗಿದ ಮಾನವನ ಜೀವನಪಯಣದಲ್ಲಿ ಕಾಡುಮೇಡುಗಳಲ್ಲಿ, ಬುಡಕಟ್ಟು ಸಮುದಾಯವಾಗಿ, ವಿವಿಧ ಪಂಗಡಗಳ ಮೂಲಕ, ಸಾವಿರಾರು ವರ್ಷಗಳ ಕಾಲ ಜೀವನ ನಡೆಸುತ್ತ ಇಂದಿನ ಆಧುನಿಕತೆಗೆ ತನ್ನನ್ನು ತೆರೆದುಕೊಂಡಿದ್ದಾನೆನ್ನಬಹುದು.   ಬಲಾಢ್ಯ ಸಮುದಾಯಗಳಿಗೆ ನೂರಾರು ಕೋಟಿ ಸುರಿಯುವ, ಜಾತಿಗಳ ಅಂಕಿ-ಸಂಖ್ಯೆ ಅರಿಯಲು ಗಣತಿ ನಡೆಸುವ ವಿಭಜನಾ ನೀತಿಗಿಂತ, ಒಂದು

Read More

ನ್ಯಾಯಾಗ v/s ಶಾಸಕಾಂಗ: ಅರ್ಥವಾಗದ ಹಿರಿಯರ ಹಿರಿ ಚರ್ಚೆಗಳು !

ಭಾರತೀಯ ಸಂವಿಧಾನದಲ್ಲಿ ‘ಚೆಕ್ ಆಂಡ್ ಬ್ಯಾಲೆ’ ಎಂಬ ವಿಧಾನವಿದ್ದು, ಇದು ಸಂವಿಧಾನದ ಯಾವುದೇ ಅಂಗವು ತನ್ನದೇ ಆದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದ ವ್ಯವಸ್ಥೆಯಾಗಿದೆ. ಪರಿಶೀಲನೆಗಳು ಮತ್ತು ಸಮತೋಲನಗಳು ಒಂದು ಅಂಗವು ತುಂಬಾ ಶಕ್ತಿಶಾಲಿಯಾಗದಂತೆ ನೋಡಿ ಕೊಳ್ಳುತ್ತದೆ. ನಮ್ಮ ಸಂವಿಧಾನ ನಿರ್ಮಾತೃಗಳು ಅತ್ಯಂತ ಸ್ಪಷ್ಟವಾಗಿ ಮೂರೂ ಅಂಗಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಪ್ರತ್ಯೇಕಿಸಿ ನೀಡಿದ್ದಾರೆ.  ಭಾರತದಲ್ಲಿ ಸುಪ್ರೀಂ ಕೋರ್ಟ್ ಬಗ್ಗೆ ಗೌರವ ಮತ್ತು ಘನತೆಯನ್ನು ಯಾವ ಮಟ್ಟದಲ್ಲಿ ಕಾಪಾಡಿಕೊಂಡು ಬರುತ್ತಿದ್ದೇವೆಂದರೆ, ಪ್ರಜಾಪ್ರಭುತ್ವದಲ್ಲಿ ಆಧುನಿಕ ಜಗತ್ತಿನ ಯಾವ ದೇಶದಲ್ಲೂ ಇಂಥಾ ದ್ದೊಂದು

Read More

ರಾಷ್ಟ್ರೀಯ ಭದ್ರತೆಯೂ ರಾಜಕೀಯ ವಿಷಯವಾದಾಗ !

ಕಾಲಚಕ್ರ, ಎಲ್ಲವನ್ನೂ ಒರೆಗೆ ಹಚ್ಚುತ್ತದೆ. ಸತ್ಯ ಶಾಶ್ವತವಾಗಿದ್ದು, ಮುಚ್ಚಿಡಲು ಸಾಧ್ಯವಿಲ್ಲ ಎಂಬ ಮಾತಿನಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ಮಾಡಿದ್ದ ಪಿತೂರಿ ಪಾಕಿಸ್ತಾನಕ್ಕಿಂತ ಏನು ಕಡಿಮೆಯಿರಲಿಲ್ಲ! ಈಗ, ಇನ್ನೊಬ್ಬ ದಾಳಿಕೋರ ರಾಣಾ ಎಂಬಾತನನ್ನು ಅಮೆರಿಕಾದ ಜೈಲಿ ನಿಂದ ಹೆಡೆಮುರಿ ಕಟ್ಟಿ ಭಾರತಕ್ಕೆ ತರಲಾಗಿದೆ. ಮುಂಬೈ ದಾಳಿಯ ಸತ್ಯಗಳು ಇನ್ನಷ್ಟು ಹೊರಬರಲಿವೆ. ದೇಶದಲ್ಲೇ ಅತ್ಯಂತ ಸುಸಜ್ಜಿತ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಶೀಘ್ರ ಸಾರಿಗೆಗೆ ಮೋನೋ-ಮೆಟ್ರೋ ರೈಲು ಸೌಲಭ್ಯಗಳ ಜೊತೆಗೆ, ಅಂತರಾಷ್ಟ್ರೀಯ ಮಟ್ಟದ ಹೆಸರು, ಆರ್ಥಿಕತೆ, ಸೇನೆ, ವ್ಯಾಪಾರ,

Read More

ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯ

ಜಲಮಾರ್ಗ, ವಾಯುಮಾರ್ಗ ಮತ್ತು ರೈಲುಮಾರ್ಗ ಹೊಂದಿರುವ ರಾಜ್ಯದ ಏಕೈಕ ನಗರವಾಗಿರುವ ಮಂಗಳೂರು ಇಂದು ಆಧುನಿಕ ಸ್ಪರ್ಶ ಪಡೆಯಲು ಪ್ರಮುಖ ಕಾರಣ, ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್ ಸಿಟಿಯ ಯೋಜನೆಗಳ ಕನಸಿನಂತೆ, ಅಂದು ಅಭಿವೃದ್ಧಿಯ ಆರಂಭಿಕ ಹೆಜ್ಜೆಗಳನ್ನು ಇಡಲು ಕಾರಣವಾದವರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಸ್ವತಂತ್ರ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಂಸದರಾಗಿ ಗೆಲ್ಲುವ ಮೂಲಕ, ಸತತ 18 ವರ್ಷಗಳ ಕಾಲ ಕೆನರಾ ಭಾಗದ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕ ಉಳ್ಳಾಲ ಶ್ರೀನಿವಾಸ ಮಲ್ಯ. ಆಧುನಿಕ

Read More

ಆಯುಷ್ಮಾನ್: ಆರ್ಥಿಕ ಕಾಳಜಿಯೋ, ಆರೋಗ್ಯ ಕಾಳಜಿಯೋ ?

‘ಅತಿ ಶಂಕಸ್ಯ ನಿವಾರಣಂ ರೋಗಸ್ಯ ಉಪಚಾರಸ್ಯ ಶ್ರೇಯಃ’ ಎಂದು ಸಂಸ್ಕೃತದಲ್ಲಿ ಮತ್ತು ಇಂಗ್ಲೀ ಷಿನ ‘ಪ್ರಿವೆನ್ಷನ್ ಈಸ್ ಬೆಟರ್ ದ್ಯಾನ್ ಕ್ಯೂರ್’ ಎಂದು ಗಾದೆಮಾತುಗಳು ಬಳಕೆಯಲ್ಲಿವೆ. ಇದು ವೈದ್ಯಲೋಕದಲ್ಲಿ ಅತಿಹೆಚ್ಚು ಬಳಸಲ್ಪಡುವ ಹೇಳಿಕೆಯೂ ಹೌದು! ಪ್ರಾರಂಭಿಕ ಹಂತದಲ್ಲಿ ಮನುಷ್ಯನ ಜೀವಿತಾವಧಿ ಸರಾಸರಿ 80-90ರ ಆಚೀಚೆ ಇತ್ತು. ಇಂದು ನವಯುವಕರೇ ಹೆಚ್ಚಾಗಿ ಸಾವಿಗೀಡಾಗುತ್ತಿರುವುದು ಆಹಾರ ಸೇವನಾ ಪದ್ಧತಿಯ ಜತೆಗೆ, ಬದಲಾದ ಜೀವನಶೈಲಿಯಿಂದಾಗಿ ಕಾಯಿಲೆ, ಬದುಕಿನೊತ್ತಡ, ಅಲ್ಪಾಯುಷ್ಯದ ಕಡೆಗೆ ಸಾಗುತ್ತಿರುವ ಲಕ್ಷಣಗಳು ಗೋಚರವಾಗುತ್ತಿವೆ. ಬಿಪಿ ಎಂಬುದು ಕೇವಲ ಒಂದು ಊಹಾತ್ಮಕ

Read More