News & Events
ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ
ಸರ್ಕಾರದ ಆರೋಗ್ಯ ಇಲಾಖೆಗಳ ನಿಯಮಗಳ ನಿರ್ಬಂಧನೆಗಳು ಗ್ರಾಮೀಣ ಭಾಗದ ಆರೋಗ್ಯ ಸಮಸ್ಯೆಗಳು ಇದೆಲ್ಲದರ ಪರಿಣಾಮವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಇರುವ ಹಲವಾರು ಡಯಾಲಿಸಿಸ್ ಬಡ ರೋಗಿಗಳಿಗೆ ಬೈಂದೂರು ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ತುರ್ತು ಚಿಕಿತ್ಸೆ ಮತ್ತು ವಿಶೇಷ ಆರೋಗ್ಯ ಸೇವೆಗಳ ಆರಂಭದ ಮೂಲಕ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಮೃದ್ಧ ಬೈಂದೂರು ಜನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ ಹೇಳಿದ್ದಾರೆ. ಶನಿವಾರ ಅಂಜಲಿ ಆಸ್ಪತ್ರೆಯಲ್ಲಿ ಹೊಸ ಅರೋಗ್ಯ ಸೇವೆಗಳನ್ನು
ಸ.ಹಿ.ಪ್ರಾ.ಶಾಲೆ ಗಂಗಾನಾಡು ಎರಡು ತರಗತಿ ಕೋಣೆಗೆ ಗುದ್ದಲಿ ಪೂಜೆ
300 ಟ್ರೀಸ್ ಸಮೃದ್ಧ ಬೈಂದೂರು ಯೋಜನೆ ಅಡಿಯಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್ ಉಡುಪಿ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಶಾಲೆಗೆ ಎರಡು ಹೊಸ ಕಟ್ಟಡಗಳ ಗುದ್ದಲಿ ಪೂಜೆ ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ರೋಬೋಸಾಫ್ಟ್ ಟೆಕ್ನಾಲಜಿಸ್ ನ ಗುಣಮಟ್ಟ ನಿರ್ವಹಣಾ ವಿಭಾಗದ ಉಪಾಧ್ಯಕ್ಷ ಶ್ರೀಧರನ್ ಕೇಶವನ್, ಜಿ ಎ ಡಿ ಕಾರ್ಯಾಚರಣೆ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಗೋಪಾಲಕೃಷ್ಣ ಕಾಮತ್,
ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿ ಇಲ್ಲವೇ ಯೋಜನೆಯನ್ನೇ ನಿಲ್ಲಿಸಿ : ಗಂಟಿಹೊಳೆ ಆಕ್ರೋಶ
ತಾಲೂಕು ಕಚೇರಿಯಲ್ಲಿ ನಡೆದ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನಗೊಳ್ಳುವ ಸಾಲ ಸೌಲಭ್ಯ ಯೋಜನೆಗಳು ಅರ್ಹತೆ
ಅರ್ಹ ಫಲಾನುಭವಿಗಳಿಗೆ 94 ಸಿಯಡಿ ಹಕ್ಕು ಪತ್ರ ವಿತರಣೆ
ಬೈಂದೂರು ತಾಲೂಕು ಕಚೇರಿಯಲ್ಲಿ ದಿನಾಂಕ 16-01-2025 ರಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆಯವರು ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ತಾಲೂಕಿನ ಒಟ್ಟು 20 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ವಾಸ್ತವ್ಯದ ಹಕ್ಕು ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸವಾಗಿದ್ದರೂ ಕೂಡ ಹಕ್ಕು ಪತ್ರ ಇಲ್ಲದೇ ಸರಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ ಕುಟುಂಬಗಳು ಕಳೆದ
ಮೋಜಣಿ -3 ತಂತ್ರಾಂಶ ಸಮಸ್ಯೆ ಸರಿಪಡಿಸುವಂತೆ ಕಂದಾಯ ಸಚಿವರಿಗೆ ಗಂಟಿಹೊಳೆ ಆಗ್ರಹ
ಸರ್ವೇ ಇಲಾಖೆಯ ಮೋಜಣಿ -3 ತಂತ್ರಾಂಶದ ನ್ಯೂನ್ಯತೆಗಳಿಂದಾಗಿ ಸಾರ್ವಜನಿಕರಿಂದ ಜಮೀನು ಹದ್ದು ಬಸ್ತು, 11ಈ, ಹಾಗೂ ಪೋಡಿ ಸಂಬಂಧ ನಾಡ ಕಚೇರಿ, ಜನ ಸ್ನೇಹಿ ಕೇಂದ್ರಗಳಲ್ಲಿ ಮೋಜಣಿ ತಂತ್ರಾಂಶದ ಮೂಲಕ ಹಾಕಲಾದ ಅರ್ಜಿಗಳು ಹಲವು ದಿನಗಳಿಂದ ಸರ್ವರ್ ಸಮಸ್ಯೆಯಿಂದ ಅಪ್ ಲೋಡ್ ಮಾಡಲಾಗದೇ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ 1.21 ಲಕ್ಷ ಅರ್ಜಿಗಳು ಮೋಜಣಿ – 3 ತಂತ್ರಾಂಶ ದ ತೊಡಕಿನಿಂದ ವಿಲೇ ಗೆ ಬಾಕಿ ಇದೆ. ಜನ ಸಾಮಾನ್ಯರಿಗೆ ತಮ್ಮ ಜಮೀನಿನ ಪೋಡಿ ಆಗುತ್ತಿಲ್ಲ,
ಜಿಲ್ಲಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಗಂಟಿಹೊಳೆ ಆಗ್ರಹ
ಉಡುಪಿ ಜಿಲ್ಲೆಯ ಆಡಳಿತ ಶಕ್ತಿಕೇಂದ್ರವಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸಹಿತ ಮಣಿಪಾಲದಲ್ಲಿರುವ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಬಂದೋದಗಿದೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ನೌಕರರ ವರ್ಗದವರು ಕೂಡಾ ಮಾಹಿತಿ ಪಡೆಯಲು, ಕರೆ ಮಾಡಲು ಕಚೇರಿಯಿಂದ ಹೊರ ಬರಬೇಕಾದ ಪರಿಸ್ಥಿತಿಯಿದ್ದು, ಸಮಸ್ಯೆಯನ್ನು ಬಗೆಹರಿಸುವಂತೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ. ಕಂದಾಯ, ಜಿಲ್ಲಾ ಪಂಚಾಯತ್, ಮಹಿಳಾ, ಮಕ್ಕಳ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಸಮಾಜ ಕಲ್ಯಾಣ,
ಬೈಂದೂರಿಗೆ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ನ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಆರ್ಐಡಿಎಫ್ ಟ್ರಾಂಚ್ 30 ರಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾಗಿ ಹೊಸ ಕಟ್ಟಡ ಮಂಜೂರಾತಿಗೆ ಶಾಸಕರು ಮನವಿ ಮಾಡಿದ್ದರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಪ್ರಸ್ತಾವನೆ
ಬೈಂದೂರಿನ ಕಂಬದ ಕೋಣೆಯಲ್ಲಿ ಎರಡನೇ ಗೋಮಾಳ ಅಭಿವೃದ್ಧಿ
ಗೋವುಗಳ ರಕ್ಷಣೆಗೆ ಪ್ರಥಮ ಆದ್ಯತೆ ಎಂದ ಶಾಸಕ ಗಂಟಿಹೊಳೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ
ವಲಸೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಶಾಸಕ ಗುರುರಾಜ ಗಂಟಿಹೊಳೆ ಆಗ್ರಹ
ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರೇ ಜಾಸ್ತಿ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯು ಕಳೆದ ಹಲವು ವರ್ಷಗಳಿಂದ ವಲಸೆ ಕಾರ್ಮಿಕರಿಗೆ ಉದ್ಯೋಗದಾತ ಜಿಲ್ಲೆಯಾಗಿ ಪರಿಣಮಿಸಿದ್ದಾರೂ ಸರಕಾರ ವಲಸೆ ಕಾರ್ಮಿಕರಿಗೆ ಕನಿಷ್ಠ ಬೇಕಾಗುವ ವಸತಿ, ನೀರು, ಶೌಚಾಲಯದ ವ್ಯವಸ್ಥೆ ಮಾಡುವಲ್ಲಿ
ಗಂಗೊಳ್ಳಿ ಬಂದರು ಕಾಮಗಾರಿ ಶೀಘ್ರ ಆರಂಭಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಒತ್ತಾಯ
ಬೈಂದೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ( ಪಿಎಂಎಂವೈ ) ಯಡಿ ಸಂಸದರಾದ ಬಿ ವೈ ರಾಘವೇಂದ್ರ ರವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ 22.18 ಕೋ. ರೂ. ಮೊತ್ತಕ್ಕೆ ಕೇಂದ್ರ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು. ಶೇ 60:40 ಅನುಪಾತದಲ್ಲಿ ಈ ಯೋಜನೆ ಅನುಷ್ಠಾನ ಗೊಳ್ಳಲಿದ್ದು ರಾಜ್ಯದ ಪಾಲಿನ ಅನುದಾನ ಬಿಡುಗಡೆ ಬಾಕಿ ಇರುವುದರಿಂದ ಈ ಕೂಡಲೇ ಸದರಿ ಮೊತ್ತವನ್ನು