News & Events
ಜಡ್ಕಲ್ -ಮುದೂರು ಗ್ರಾಮಗಳ ಪ್ಲಾಟಿಂಗ್ ಸಮಸ್ಯೆ ಸಹಿತ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದ ಶಾಸಕರು
ಜಡ್ಕಲ್ ಹಾಗೂ ಮುದೂರು ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ನೂರಾರು ಕುಟುಂಬಗಳು ಭೂ ಸಂಬಂಧಿ ಪ್ಲಾಟಿಂಗ್ ಸಮಸ್ಯೆ ಯಿಂದಾಗಿ ತಮ್ಮ ಜಮೀನಿನ ಮಾಲಿಕತ್ವದ ದಾಖಲೆಗಳನ್ನು ಪಡೆಯಲು ಆಗದೇ ಇರುವ ಸಮಸ್ಯೆಯ ವಿಚಾರವಾಗಿ ಆ ಭಾಗದ ಪ್ರಮುಖರ ನಿಯೋಗದೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ವಿಷಯ ಪ್ರಸ್ತಾಪಿಸಿದರು. ಪ್ರಸ್ತುತ ಸಾಕಷ್ಟು ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು
ಜನವರಿಯಲ್ಲಿ ಅದ್ದೂರಿ ಬೈಂದೂರು ಉತ್ಸವ – ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಬೈಂದೂರು: ಜಿಲ್ಲೆಯ ತುತ್ತತುದಿಯಲ್ಲಿ ಅತ್ಯಂತ ವಿಶಾಲ ವ್ಯಾಪ್ತಿ ಹೊಂದಿರುವ ಬೈಂದೂರು ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆ ಮೂಲಕ ಅಭಿವೃದ್ಧಿ ಪರಿಕಲ್ಪನೆಯ ಉದ್ದೇಶದಿಂದ ಮತ್ತು ಜಾಗತಿಕ ಮಟ್ಟದಲ್ಲಿ ಬೈಂದೂರು ಕ್ಚೇತ್ರದವರನ್ನು ಒಗ್ಗೂಡಿಸುವ ಚಿಂತನೆಯಲ್ಲಿ ಸಮೃದ್ಧ ಬೈಂದೂರು, ವಿವಿಧ ಸಂಘ ಸಂಸ್ಥೆ ಹಾಗೂ ತಾಲೂಕು ಆಡಳಿತ ಬೈಂದೂರು ಇದರ ಸಹಭಾಗಿತ್ವದಲ್ಲಿ ಎರಡನೇ ವರ್ಷದ ಸಾಂಸ್ಕ್ರತಿಕ ಸಂಭ್ರಮದ ಬೈಂದೂರು ಉತ್ಸವ ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಉಪ್ಪುಂದ ಕಾರ್ಯಕರ್ತ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ
ಸತಾಯಿಸದೆ ಜನರ ಕೆಲಸ ಮಾಡಿಕೊಡಿ: ಗುರುರಾಜ ಗಂಟಿಹೊಳೆ
ಬೈಂದೂರು ತಾಲ್ಲೂಕು ಕಚೇರಿಗೆ ಬರುವ ಜನರ ಕೆಲಸ ಮಾಡಿಕೊಡಲು ಅಧಿಕಾರಿಗಳು, ಸಿಬ್ಬಂದಿ ವಿಳಂಬ ಮಾಡಿದರೆ, ಸತಾಯಿಸಿದರೆ ಸಹಿಸಲು ಸಾಧ್ಯವಿಲ್ಲ. ಸ್ವಭಾವ, ಕಾರ್ಯ ವೈಖರಿಯನ್ನು ಜನರಿಗೆ ಅನುಕೂಲವಾಗುವಂತೆ ಬದಲಾಯಿಸಿಕೊಳ್ಳಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ತಾಕೀತು ಮಾಡಿದರು. ತಾಲ್ಲೂಕು ಕಚೇರಿಯಲ್ಲಿ ಜನರು ನೀಡಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ತಾಲ್ಲೂಕು ಕಚೇರಿ ಪ್ರಜಾಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ವಿವಿಧ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಕಚೇರಿಗೆ
ಜೀವನದ ನೆನಪುಗಳು ಯಶಸ್ಸಿನ ಮೈಲುಗಲ್ಲಾಗಲಿ : ಶಾಸಕ ಗುರುರಾಜ್ ಗಂಟಿಹೊಳೆ
‘ಕೊಡ್ಗಿ ನೆನಪು 4’ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಕುಂದಾಪುರ: ‘ಜೀವನದಲ್ಲಿ ಬಂದು ಹೋಗುವ ಅನೇಕ ಘಟನೆಗಳ ಹಿಂದೆ ಇರುವ ವಿಸ್ತಾರ ನೆನಪುಗಳು ನಮ್ಮ ಯಶಸ್ಸಿನ ಮೈಲುಗಲ್ಲಾಗಬೇಕು’ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅಮಾಸೆಬೈಲು ಚಾರಿಟಬಲ್ ಟ್ರಸ್ಟ್, ಕರ್ಣಾಟಕ ಬ್ಯಾಂಕ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯಿತಿ, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ, ಕೊಡ್ಗಿ ಅಭಿಮಾನಿ ಬಳಗದ ಸಹಯೋಗದಲ್ಲಿ ಭಾನುವಾರ ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ‘ಕೊಡ್ಗಿ
ಕರಾವಳಿ ಜಿಲ್ಲೆಯ ಮಳೆ ಹಾನಿಗೆ ವಿಶೇಷ ಪರಿಹಾರಕ್ಕೆ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಭಾರೀ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ವ್ಯಾಪಕ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಕರಾವಳಿ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಮಾಡಿದರು. ಪ್ರಾಕೃತಿಕ ವಿಕೋಪದಿಂದ ನೂರಾರು ಮರಗಳು ಬಿದ್ದು, ವಿದ್ಯುತ್ ಕಂಬಗಳಿಗೆ, ಮನೆಗಳಿಗೆ ಹಾನಿಯಾಗಿದ್ದು, ರಸ್ತೆ, ಮೋರಿ, ಶಾಲಾ ಕಟ್ಟಡಗಳು, ಕಾಲುಸಂಕಗಳು ಹಾಗೂ ಸೇತುವೆಗಳು ಹಾನಿಗೊಳಗಾಗಿವೆ. ಕಳೆದ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ಸಮರ್ಪಕ
ಸಣ್ಣ ವ್ಯಾಪಾರಸ್ಥರ ಹಿತ ಕಾಪಾಡುವಂತೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಗಂಟಿಹೊಳೆ
ಬೇಕರಿ, ಕಾಂಡಿಮೆಂಟ್ಸ್, ಹೋಟೆಲು, ಕಿರಾಣಿ ಅಂಗಡಿ, ಟೀ, ತರಕಾರಿ ಅಂಗಡಿ, ಮುಂತಾದ ಸಣ್ಣ ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರ ಹಿತ ಕಾಪಾಡಲು ಹಾಗೂ ಭವಿಷ್ಯದಲ್ಲೂ ಸೂಕ್ತ ರಕ್ಷಣೆ ಒದಗಿಸಲು ಸದನದಲ್ಲಿ ಪ್ರಸ್ತಾಪಿಸಿದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿ ಹೊಳೆ : ಸರಕಾರದಿಂದ ಸೂಕ್ತ ಪರಿಹಾರ ಕ್ರಮದ ಭರವಸೆ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಇತ್ತೀಚಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ಯುಪಿಐ ವ್ಯವಹಾರ ಸಂಬಂಧ ಯಾವುದೇ
ಪೊಲೀಸ್ ಠಾಣೆಗೆ ಹೊಸ ವಾಹನಗಳನ್ನು ಒದಗಿಸಲು ಶಾಸಕ ಗಂಟಿಹೊಳೆ ಮನವಿ
ರಾಜ್ಯದಲ್ಲಿ ಪ್ರಸ್ತುತ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಒದಗಿಸಿರುವ ವಾಹನಗಳ ಸುಸ್ಥಿತಿ ಹಾಗೂ ಹಲವಾರು ಪೊಲೀಸ್ ಠಾಣೆಗಳಲ್ಲಿ ಠಾಣಾಧಿಕಾರಿಗಳು ಬಳಸುವ ವಾಹನಗಳು ಬಳಸಲು ಯೋಗ್ಯವಾಗಿಲ್ಲದೇ ಇರುವುದರಿಂದ ಅಂತಹ ವಾಹನಗಳನ್ನು ಗುರುತಿಸಿ ಸರ್ಕಾರ ಹೊಸ ವಾಹನಗಳನ್ನು ಒದಗಿಸಲು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸರಕಾರಕ್ಕೆ ಆಗ್ರಹಿಸಿದ್ದಾರೆ. ವಿಧಾನ ಮಂಡಲ ಅಧಿವೇಶದಲ್ಲಿ ಈ ಬಗ್ಗೆ ಶಾಸಕರು ಕೇಳಿದ ಚುಕ್ಕೆ ರಹಿತ ಪ್ರಶ್ನೆ ಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ರಾಜ್ಯದಲ್ಲಿ ಪ್ರಸ್ತುತ ಒದಗಿಸಿರುವ ವಾಹನಗಳ ಪೈಕಿ 5778
ಬೈಂದೂರು ವಿಧಾನ ಸಭಾ ಕ್ಷೇತ್ರದ ಕುಮ್ಕಿ, ಪೋರಂಬೊಕು ಮಿತಿಯ 94ಸಿ ಅರ್ಜಿಗಳಿಗೆ ಹಕ್ಕು ಪತ್ರ ಒದಗಿಸಲು ಶಾಸಕರ ಒತ್ತಾಯ
ಕರಾವಳಿ ಜಿಲ್ಲೆಗಳಲ್ಲಿ ವಿಶೇಷವಾಗಿ ಬೈಂದೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ 94 ಸಿ ಅಡಿ ಅರ್ಜಿ ಹಾಕಿಯೂ ಈವರೆಗೂ ಹಕ್ಕು ಪತ್ರ ಸಿಗದೇ ನೂರಾರು ಕುಟುಂಬಗಳು ವಿವಿಧ ಸರಕಾರಿ ಸೌಲಭ್ಯ ವಂಚಿತರಾಗಿದ್ದಾರೆ. ಕೂಡಲೇ ಸರಕಾರ ಹಕ್ಕುಪತ್ರ ವಿತರಿಸಬೇಕು ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿದ ಚುಕ್ಕೆ ರಹಿತ ಪ್ರಶ್ನೆಗೆ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ.ಆರ್.ಜೆಡ್ ಹಾಗೂ ಪೋರಂಬೊಕು ಸ್ಥಳವನ್ನು
ಸಂಜೀವಿನಿ ಒಕ್ಕೂಟ, ಪಶು ಸಖಿ, ಕೃಷಿ ಸಖಿಯರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಸದನದಲ್ಲಿ ಶಾಸಕರ ಆಗ್ರಹ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ 2025 ನೇ ಸಾಲಿನ ಮುಂಗಾರು ಅಧಿವೇಶನದಲ್ಲಿ ಎನ್ ಆರ್ ಎಲ್ ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ ಹಾಗೂ ಪಶು ಸಖಿ ಮುಂತಾದ ಸಿಬ್ಬಂದಿಗಳು ಅತ್ಯಂತ ಕಡಿಮೆ ವೇತನ ಹಾಗೂ ಅಸಮರ್ಪಕ ಪ್ರಯಾಣ ಭತ್ಯೆ ಪಡೆಯುತ್ತಿರುವ ವಿಚಾರ ಹಾಗೂ ವೇತನ ಹಾಗೂ ಪ್ರಯಾಣ ಭತ್ಯೆ ಸೇರಿದಂತೆ ಇನ್ನಿತರ ಸೌಲಭ್ಯದ ಬೇಡಿಕೆ ಸಲ್ಲಿಸಿರುವ ವಿಚಾರದ ಕುರಿತು ಹಾಗೂ ಸದರಿ ಸಿಬ್ಬಂದಿಗಳ ನ್ಯಾಯಯುತ ಬೇಡಿಕೆ ಈಡೇರಿಸಲು ಬೈಂದೂರು
ಸಣ್ಣ ವರ್ತಕರ ಹಿತ ಕಾಪಾಡಲು ಸರ್ಕಾರಕ್ಕೆ ಶಾಸಕ ಗಂಟಿಹೊಳೆ ಆಗ್ರಹ
ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ಯುಪಿಐ ವ್ಯವಹಾರ ಸಂಬಂಧ ಅಗತ್ಯ ತಿಳಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳಿ ಸದನದಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೇಕರಿ, ಕಾಂಡಿಮೆಂಟ್ಸ್, ಹೋಟೆಲು, ಕಿರಾಣಿ ಅಂಗಡಿ, ಟೀ ಸ್ಟಾಲ್, ಹೂವಿನ ವ್ಯಾಪಾರಿ ಸಹಿತ ಸಣ್ಣ ವ್ಯಾಪಾರ ಮಾಡಿಕೊಂಡಿರುವವರಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ಏಕಾಏಕಿ ನೋಟಿಸ್ ಜಾರಿ ಮಾಡಿ, ಅವರನ್ನು ಆತಂಕಕ್ಕೆ ತಳ್ಳಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಮತ್ತು ಈ ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ಯುಪಿಐ
