ಮೆಟ್ಟಿನಹೊಳೆ ಶಾಲೆಯ ನೂತನ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ

ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮೆಟ್ಟಿನಹೊಳೆ ಶಾಲೆಯಲ್ಲಿ ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಡಿಯಲ್ಲಿ MRPL ನಿಂದ ಸಿಎಸ್ಆರ್ ನಿಧಿ ರೂಪಾಯಿ 45 ಲಕ್ಷ ಮೂರು ಕೊಠಡಿಗಳಿಗೆ ಮಂಜೂರಾಗಿದ್ದು ಕೊಠಡಿಗಳ ಕಾಮಗಾರಿಯ ಶಂಕುಸ್ಥಾಪನೆಯನ್ನು ಇಂದು ಮಾನ್ಯ ಶಾಸಕರಾದ ಶ್ರೀ ಗುರುರಾಜಶೆಟ್ಟಿ ಗಂಟಿ ಹೊಳೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಪ್ರೀತಮ್ ಸುಶಾಂತ್ ರೈ ಮಂಗಳೂರು ಶ್ರೀ ಮಹಾಲಿಂಗ ನಾಯ್ಕ ಸದಸ್ಯರು ಶ್ರೀ ಕೊಲ್ಲೂರು ಆಡಳಿತ ವ್ಯವಸ್ಥಾಪನ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ

Read More

ಸ್ವಉದ್ಯೋಗಕ್ಕೆ ಸಂಜೀವಿನಿ ಮಾದರಿಯಾಗಲಿ : ಗುರುರಾಜ್ ಗಂಟಿಹೊಳೆ

ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿರುವ ಸಂಜೀವಿನಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಸ್ವಉದ್ಯೋಗದ ಚಟುವಟಿಕೆಗಳನ್ನು ನಡೆಸುತ್ತಿದ್ದು, ಇದು ಎಲ್ಲರಿಗೂ ಮಾದರಿಯಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈಗಾಗಲೇ ಸಂಜೀವಿನಿಯ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ

Read More

ಉಡುಪಿ ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ ‘ಆದಿದ್ವಾರ ’ ಆನ್‌ಲೈನ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಇಂದು ಉಡುಪಿ ಜಿಲ್ಲೆಯ ದಿವ್ಯಾಂಗರಿಗಾಗಿ (PwDs) ಆಯೋಜಿಸಲಾದ ‘ಆದಿದ್ವಾರ’ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿವ್ಯಾಂಗರ ಶಕ್ತೀಕರಣವು ಸರ್ಕಾರ ಮತ್ತು ಸಮಾಜದ ಸಮಾನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದಿವ್ಯಾಂಗರು ಆತ್ಮನಿರ್ಭರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. “ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಸಿಗಬೇಕು. ದಿವ್ಯಾಂಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ನಮ್ಮ ಪ್ರಾಮುಖ್ಯತೆ. ಇಂತಹ

Read More

ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆ: ಶಾಸಕ ಗಂಟಿಹೊಳೆ

ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಸಾಧಕರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ. ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಗೋಪಾಲಕೃಷ್ಣ ಅಡಿಗ ಸ್ಮಾರಕ ಟ್ರಸ್ಟ್ ಬೆಂಗಳೂರು ಇವರ ಸಹಯೋಗದಲ್ಲಿ ಕವಿ ಗೋಪಾಲಕೃಷ್ಣ ಅಡಿಗರ 108ನೇ ಜನ್ಮ ದಿನೋತ್ಸವದ ಪ್ರಯುಕ್ತ ಅಯೋಜಿಸಿದ್ದ ಅಡಿಗ ಸಂಸ್ಮರಣೆ ಮತ್ತು ಕಾರಂತರ ಕುರಿತು

Read More

ಹರ್ಕೂರಿನ ಕೊರಗ ಸಮುದಾಯದ ಮನೆಯಲ್ಲಿ ಶಾಸಕರ ಗ್ರಾಮ ವಾಸ್ತವ್ಯ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹರ್ಕೂರು ಗ್ರಾಮದ ಹಿಂದುಳಿದ ಕೊರಗ ಸಮುದಾಯದ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರೊಂದಿಗೆ ಭೋಜನ ಸವಿದು, ಸಮಸ್ಯೆಗಳನ್ನು ಆಲಿಸಿದ್ದಾರೆ. ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಕೂರು ಗ್ರಾಮದ ಮದುಕೊಡ್ಡು ಎಂಬಲ್ಲಿನ ಕೊರಗ ಸಮುದಾಯದ ಸುರೇಂದ್ರ ಎಂಬುವವರ ಮನೆಯಲ್ಲಿ ಮಂಗಳವಾರ ರಾತ್ರಿ ಶಾಸಕರು ವಾಸ್ತವ್ಯ ಹೂಡಿದ್ದರು. ಮನೆಯವರ ಜೊತೆ ಕುಳಿತು ಆತ್ಮೀಯವಾಗಿ ಭೋಜನ ಸವಿದ ಅವರು, ಸಾಮಾನ್ಯರಲ್ಲಿ ಸಾಮಾನ್ಯರಂತೆ ರಾತ್ರಿ ವಿಶ್ರಾಂತಿ ಪಡೆದರು. ಈ ಸಂದರ್ಭದಲ್ಲಿ ಮಹಿಳೆಯರಿಗೆ ಬಾಗಿನ ನೀಡಿ ಗೌರವ

Read More

ಫಲಿತಾಂಶಕ್ಕಾಗಿ ಶಿಕ್ಷಣ ಮೌಲ್ಯ ಕಡಿಮೆಯಾಗದಿರಲಿ

ಬೈಂದೂರು ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ವಾತನಾಡಿದರು. ಡಿಡಿಪಿಐ ಲೋಕೇಶ್, ಬೈಂದೂರು ಬಿಇಒ ನಾಗೇಶ ಕೆ. ನಾಯ್ಕ, ಕುಂದಾಪುರ ಬಿಇಒ ಶೋಭಾ ಶೆಟ್ಟಿ ಮತ್ತಿತರರಿದ್ದರು. ಬೈಂದೂರು: ಈಗಾಗಲೇ ಬೈಂದೂರು ವ್ಯಾಪ್ತಿಯ ಕೆಲವು ಶಾಲೆಗಳು ಕಳೆದ ಸಾಲಿನ ಫಲಿತಾಂಶದಲ್ಲಿ ಹಿನ್ನಡೆ ಕಂಡಿದ್ದು, ಅಂತಹ ಶಾಲೆಗಳು ಈ ಸಾಲಿನಲ್ಲಿ ಸುಧಾರಿತ ಕ್ರಮಗಳ ಬಗ್ಗೆ ಚಿಂತನೆ ನಡೆಸಿದ್ದಾರೆ. ಕಳೆದ ಸಾಲಿನಲ್ಲಿ ಕಡಿಮೆ ಶೈಕ್ಷಣಿಕ ಸಾಧನೆ ತೋರಿದ ಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶ

Read More

ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ

ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್‌ನಡಿ 88ನೆಯ ಮನೆಯನ್ನು ಶನಿವಾರ ಹಸ್ತಾಂತರಿಸಲಾಯಿತು. ಎಂಎಸ್‌ಆರ್‌ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ.ಶಾರದಾಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಇವರ ಸ್ಮರಣೆಯಲ್ಲಿ, 7,00,000 ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು ಬೈಂದೂರು ತಾಲೂಕಿನ ಜಡ್ಕಲ್ ಸೆಲ್ಕೋಡ್ ನಿವಾಸಿಗಳಾದ ಚಿಕ್ಕಮ್ಮ ಮತ್ತು ಶಂಕರ ನಾಯ್ಕ್ ಇವರ ಪುತ್ರ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್‌ಗೆ ನಿರ್ಮಿಸಿಕೊಡಲಾಗಿದೆ. ಇದು ಶಾರದಾ ಎಂ ಅವರ ಪ್ರಾಯೋಜಕತ್ವದ ಎರಡನೇ

Read More

ಸಾರ್ವಜನಿಕ ಸಹಭಾಗಿತ್ವದಡಿ ಕ್ಷೇತ್ರದಲ್ಲಿ ಅಭಿವೃದ್ಧಿ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ವಾಡುವ ಪ್ರಯತ್ನ ನಡೆಯುತ್ತಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾವಾಣಿಕ ಪ್ರಯತ್ನ ವಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು 3 ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ

Read More

ಇ.ಎಸ್.ಐ ಆರೋಗ್ಯ ವಿಮಾ ಯೋಜನೆಯಡಿ ಜಿಲ್ಲೆಯ ನೋಂದಾಯಿತ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕರು

ಉಡುಪಿ ಜಿಲ್ಲೆಯಲ್ಲಿ ಕೆ.ಎಂ.ಸಿ ಮಣಿಪಾಲ ಆಸ್ಪತ್ರೆಯನ್ನು ಯೋಜನೆಯಡಿಯಲ್ಲಿ ಮುಂದುವರಿಸಲು ಆಗ್ರಹ. ಇ-ಪೋರ್ಟಲ್ ನಲ್ಲಿ ತಿರಸ್ಕೃತಗೊಂಡ ಎಲ್ಲಾ ಆಸ್ಪತ್ರೆಗಳನ್ನು ಮತ್ತೊಮ್ಮೆ ಪರಿಗಣಿಸುವ ಪ್ರಸ್ತಾವನೆ ಸರಕಾರದ ಹಂತದಲ್ಲಿದೆ ಎಂದ ಕಾರ್ಮಿಕ ಸಚಿವರು. ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ರಾಜ್ಯದಲ್ಲಿ ಇತ್ತೀಚಿಗೆ ಇ.ಎಸ್.ಐ ಎಂಪನೆಲ್ಡ್ ಆಸ್ಪತ್ರೆಗಳ ಸಂಖ್ಯೆಯನ್ನು ಕಡಿತ ಗೊಳಿಸಿರುವುದು ಮುಖ್ಯವಾಗಿ ಉಡುಪಿ ಜಿಲ್ಲೆಯಲ್ಲಿರುವ ಕಸ್ತೂರ್ಬಾ ಆಸ್ಪತ್ರೆಯನ್ನು ಇ.ಎಸ್.ಐ ಆರೋಗ್ಯ ಸೇವೆ ನೀಡುವ ಎಂಪನೆಲ್ಡ್

Read More

‘ದುಡ್ಮಿ’ ಯೋಜನೆ ಲೋಕಾರ್ಪಣೆ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೈಂದೂರು ಉತ್ಸವದಲ್ಲಿ ಭಾನುವಾರ ರಾತ್ರಿ ಭಾಗವಹಿಸಿ ಶಾಸಕ ಗಂಟಿಹೊಳೆ ಅವರ ನೂತನ ‘ದುಡ್ಮಿ’ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ. ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಬಗ್ಗೆ ವಾತ್ರ ಗಮನ ಹರಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ವಾಡಿಲ್ಲ, ವಾಡುವುದೂ ಇಲ್ಲ. ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ. ನಿಸ್ವಾರ್ಥತೆಯಿಂದ ಎಲ್ಲರೂ ಉತ್ತಮ ಕೆಲಸ ವಾಡಬೇಕು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗಂಟಿಹೊಳೆ ಅವರು

Read More