News & Events
ಕಸ್ತೂರಿ ರಂಗನ್ ವರದಿ ಜಾರಿಗೆ ಕರಡು ಅಧಿಸೂಚನೆ: ಸಮಾಲೋಚನಾ ಸಭೆ
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜಾರಿಯಾಗಲಿರುವ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ 7ನೇ ಕರಡು ಅಧಿಸೂಚನೆ ಪ್ರಕಟಿಸಿದ್ದು, ಅದರ ಕುರಿತಾಗಿ ಚರ್ಚಿಸಲು ಸೋಮವಾರ ಕುಂದಾಪುರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಸ್ತೂರಿ ರಂಗನ್ ಸಮಿತಿಯ ವರದಿ ಜಾರಿಯ 7ನೇ ಅಧಿಸೂಚನ 60 ದಿನದ ಆಕ್ಷೇಪಣೆ ನೀಡಿದೆ. ಈ ಹಿಂದೆ 6 ಬಾರಿ ಅಧಿಸೂಚನೆ ಹೊರಡಿಸಿದಾಗ ಅನುಷ್ಠಾನ
ಸಿಎಸ್ಆರ್ ನಿಧಿಯಡಿ ಸರ್ಕಾರಿ ಶಾಲೆಗೆ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ
ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯ ಕಾಮಗಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಸಾಧ್ಯ. ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿಯಾಗುತ್ತದೆ ಎಂದರು.
ಗುಜ್ಜಾಡಿ ಲೈಟ್ಹೌಸ್ ಪ್ರದೇಶದಲ್ಲಿ ಕಡಲ ಕೊರೆತ ವೀಕ್ಷಣೆ – ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಲೈಟ್ಹೌಸ್ ಪ್ರದೇಶದಲ್ಲಿ ಉಂಟಾಗಿರುವ ಕಡಲ ಕೊರೆತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಕಡಲ ಕೊರೆತದಿಂದ ಕರಾವಳಿ ಪ್ರದೇಶದಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಸ್ಥಳೀಯರ ಆತಂಕದ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ, ತಕ್ಷಣವೇ ಅಗತ್ಯ ಮುಂಜಾಗ್ರತಾ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಸಾರ್ವಜನಿಕರ ಸುರಕ್ಷತೆ ಹಾಗೂ ಕರಾವಳಿ ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಕಡಲ ಕೊರೆತವನ್ನು ತಡೆಗಟ್ಟಲು ಅಗತ್ಯ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳುವಂತೆ
ಧರ್ಮ ಭಕ್ತಿ ಸೇವೆ ಸಂಸ್ಕೃತಿಯ ಸಂಭ್ರಮದ ಬೈಂದೂರು ಚಾತುರ್ಮಾಸಕ್ಕೆ ಚಾಲನೆ
ಧರ್ಮದ ಅಂತರಾಳದಲ್ಲಿ ಸುಖವಿದೆ. ಚಾತುರ್ಮಾಸ್ಯದಿಂದ ಶರೀರ ಮತ್ತು ಮನೋಶುದ್ಧಿ ದೊರೆಯಲಿದೆ. ಜನರಿಗೆ ಧಾರ್ಮಿಕ ಪ್ರೇರಣೆ ನೀಡಿ, ಭಕ್ತಿಯ ಮಾರ್ಗದೆಡೆಗೆ ಸೆಳೆದು ಧರ್ಮದ ಅಂತರಾಳದ ಸಂತೋಷವ ಉಂಟುಮಾಡುವ ಪ್ರಮುಖ ಹೆಜ್ಜೆ ಚಾತುರ್ಮಾಸ್ಯ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಧರ್ಮಸಭೆ ಉದ್ಘಾಟಿಸಿ, ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆ
ಬೈಂದೂರು ಚಾತುರ್ಮಾಸ ವೃತಾಚರಣೆ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
ಜು.29 ರಿಂದ ಪ್ರಾರಂಭಗೊಂಡು 48 ದಿನಗಳ ಕಾಲ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನ ಗೋಳಿಹೊಳೆಯಲ್ಲಿ ನಡೆಯಲಿರುವ ಬೈಂದೂರು ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು ಹಾಗೂ ಚಾರ್ತುಮಾಸ ವೃತಾಚರಣೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಚಾತುರ್ಮಾಸ ವೃತಾಚರಣೆ ಶಿರೂರು ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್,ಕಾರ್ಯದರ್ಶಿ ದಿನೇಶ ಪೂಜಾರಿ ಬಪ್ಪನಬೈಲು,ಶಿರೂರು ಬಿಲ್ಲವ ಸಮಾಜದ ಅಧ್ಯಕ್ಷ
ಆಜ್ರಿ ಗ್ರಾಮದಲ್ಲಿ ಗಾಳಿ-ಮಳೆಯಿಂದ ಬೆಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಗಂಟಿಹೊಳೆ
ಬೈಂದೂರು ವಿಧಾನಸಭಾ ಕ್ಷೇತ್ರದ ಆಜ್ರಿ ಗ್ರಾಮದ ಎಡ್ನಳಿ, ಹಕ್ಲ್ ಮನೆ ಹಾಗೂ ಮಕ್ಕಿಮನೆ ಭಾಗಗಳಲ್ಲಿ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದ ಅಡಿಕೆ, ತೆಂಗು ಹಾಗೂ ಬಾಳೆ ಬೆಳೆಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಂತ್ರಸ್ತ ರೈತರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ ಧೈರ್ಯ ತುಂಬಿದರು. ಈ ವೇಳೆ ಸಂಬಂಧಿತ ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಹಾನಿಯ
ಶಿಕ್ಷಕಿ ಕಾಲಿಗೆರಗಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ
ಬೈಂದೂರಿನ ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಶಾಲೆ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶದ ರೂವಾರಿ ಎನ್ನಲಾದ ಪ್ರಾಂಶುಪಾಲೆ ಜಯಂತಿ ಅವರ ಕಾಲಿಗೆರಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗೌರವಿಸಿದರು. ಕಳೆದ ವರ್ಷ ಶೇ.35ರಷ್ಟು ಫಲಿತಾಂಶವಿದ್ದ ಶಾಲೆ ಈ ಬಾರಿ ಶೇ. 94ರಷ್ಟು ಫಲಿತಾಂಶ ಗಳಿಸಿದೆ. ಕಳೆದ ವರ್ಷ ಶಾಸಕಗುರುರಾಜ್ ಗಂಟಿಹೊಳೆ ಪ್ರಾಂಶುಪಾಲರನ್ನು ಹಾಗೂ ಶಿಕ್ಷಕರನ್ನು ಕಟು ಮಾತುಗಳಿಂದ ತರಾಟೆಗೆ ತೆಗೆದುಕೊಂಡಿದ್ದರು. ಶನಿವಾರ ಶಾಲೆಗೆ ಭೇಟಿ ನೀಡಿದ ಶಾಸಕರು ಭಾವುಕರಾಗಿ ಶಿರಬಾಗಿದರು. ಇದನ್ನು ಕಂಡು ಅಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾದವು.‘ಸೋತಾಗ ಎಚ್ಚರಿಸುವ
ಮೆಟ್ಟಿನಹೊಳೆ ಶಾಲೆಯ ನೂತನ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ
ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮೆಟ್ಟಿನಹೊಳೆ ಶಾಲೆಯಲ್ಲಿ ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಡಿಯಲ್ಲಿ MRPL ನಿಂದ ಸಿಎಸ್ಆರ್ ನಿಧಿ ರೂಪಾಯಿ 45 ಲಕ್ಷ ಮೂರು ಕೊಠಡಿಗಳಿಗೆ ಮಂಜೂರಾಗಿದ್ದು ಕೊಠಡಿಗಳ ಕಾಮಗಾರಿಯ ಶಂಕುಸ್ಥಾಪನೆಯನ್ನು ಇಂದು ಮಾನ್ಯ ಶಾಸಕರಾದ ಶ್ರೀ ಗುರುರಾಜಶೆಟ್ಟಿ ಗಂಟಿ ಹೊಳೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಪ್ರೀತಮ್ ಸುಶಾಂತ್ ರೈ ಮಂಗಳೂರು ಶ್ರೀ ಮಹಾಲಿಂಗ ನಾಯ್ಕ ಸದಸ್ಯರು ಶ್ರೀ ಕೊಲ್ಲೂರು ಆಡಳಿತ ವ್ಯವಸ್ಥಾಪನ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ
ಸ್ವಉದ್ಯೋಗಕ್ಕೆ ಸಂಜೀವಿನಿ ಮಾದರಿಯಾಗಲಿ : ಗುರುರಾಜ್ ಗಂಟಿಹೊಳೆ
ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿರುವ ಸಂಜೀವಿನಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಸ್ವಉದ್ಯೋಗದ ಚಟುವಟಿಕೆಗಳನ್ನು ನಡೆಸುತ್ತಿದ್ದು, ಇದು ಎಲ್ಲರಿಗೂ ಮಾದರಿಯಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈಗಾಗಲೇ ಸಂಜೀವಿನಿಯ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ
ಉಡುಪಿ ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ ‘ಆದಿದ್ವಾರ ’ ಆನ್ಲೈನ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಇಂದು ಉಡುಪಿ ಜಿಲ್ಲೆಯ ದಿವ್ಯಾಂಗರಿಗಾಗಿ (PwDs) ಆಯೋಜಿಸಲಾದ ‘ಆದಿದ್ವಾರ’ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿವ್ಯಾಂಗರ ಶಕ್ತೀಕರಣವು ಸರ್ಕಾರ ಮತ್ತು ಸಮಾಜದ ಸಮಾನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದಿವ್ಯಾಂಗರು ಆತ್ಮನಿರ್ಭರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. “ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಸಿಗಬೇಕು. ದಿವ್ಯಾಂಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ನಮ್ಮ ಪ್ರಾಮುಖ್ಯತೆ. ಇಂತಹ
