News & Events
ಬೈಂದೂರು ಯುವ ಮೋರ್ಚಾದಿಂದ ತಿರಂಗ ಯಾತ್ರೆ, ಬೈಕ್ ರ್ಯಾಲಿ
ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ತಿರಂಗ ಯಾತ್ರೆ – ಬೃಹತ್ ಬೈಕ್ ರ್ಯಾಲಿ ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ನಡೆಯಿತು. ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿದರು. ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿ, ಸ್ವಾತಂತ್ರ್ಯ ದಿನ ಹತ್ತಿರದಲ್ಲಿದೆ. ಅದಕ್ಕೆ ಮುನ್ನವೇ ತಿರಂಗ ಯಾತ್ರೆ, ಬೃಹತ್ ಬೈಕ್ ರ್ಯಾಲಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಹಾಗೂ ಎಲ್ಲೆಡೆ ಸಂಭ್ರಮ ಮನೆ
ಸ್ವಚ್ಛ, ವ್ಯಸನಮುಕ್ತ ಬೈಂದೂರು ಸಂಕಲ್ಪ: ನಾಗರಿಕರು ಕೈಜೋಡಿಸಲು ಗಂಟಿಹೊಳೆ ಕರೆ
ಸ್ವಾತಂತ್ರ್ಯೋತ್ಸವವನ್ನು ಬೈಂದೂರು ಕ್ಷೇತ್ರದಾದ್ಯಂತ ಸ್ವಚ್ಛತೆ ಹಾಗೂ ವ್ಯಸನ ಮುಕ್ತ ಪರಿಕಲ್ಪನೆಯಡಿ ಆಚರಿಸಲು ಸಂಕಲ್ಪಿಸಲಾಗಿದೆ ಎಂದು ಶಾಸಕ ಗುರುರಾಜ ಶೆಟ್ಟಿ ಗಂಟುಹೊಳೆ ಹೇಳಿದ್ದಾರೆ. ಈ ಸಂಕಲ್ಪದಂತೆ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಆ. 1ರಿಂದ ಆ. 15ರವರೆಗೆ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ನಾನಾ ಕಡೆಗಳಲ್ಲಿ ಸ್ವಚ್ಛತೆ ಹಾಗೂ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಅನೈರ್ಮಲ್ಯ
ಪಡೆದ ಸವಲತ್ತು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ : ಶಾಸಕ ಗಂಟಿ ಹೊಳೆ
ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿ ಪರ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಸ್ವ-ಉದ್ಯೋಗ ಸಂಬಂಧ ಸುಧಾರಿತ ಉಪಕರಣ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಮಾತನಾಡಿ ಬೈಂದೂರು ಕ್ಷೇತ್ರವು ಸಾಕಷ್ಟು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು ವಿವಿಧ ವೃತ್ತಿಪರರು ಸ್ವ-ಉದ್ಯೋಗ
‘ಸ್ವಚ್ಛ ಮರವಂತೆ-ಸುಂದರ ಮರವಂತೆ’ ಅಭಿಯಾನ
ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು. ಬೈಂದೂರು ಕ್ಷೇತ್ರದ ಶಾಸಕರು ಗುರುರಾಜ್ ಗಂಟೆಹೊಳೆಯವರು ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುದರ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಹಾಗೆ ಸ್ಥಳೀಯ ಸಂಘ ಸಂಸ್ಥೆಗಳು ಸಾಹಸ್ NGO ಅವರ ಸ್ವಚ್ಛ ಕರಾವಳಿ ಮಿಷನ್ ಯೋಜನೆ (ಶಓಮಿ ಟೆಕ್ನಾಲಜಿ
ಗಂಗೊಳ್ಳಿ-ಕುಂದಾಪುರ ಬಾರ್ಜ್ ಸೇವೆಗೆ ಸಂಸದರ ಒಪ್ಪಿಗೆ : ಶಾಸಕ ಗುರುರಾಜ್ ಗಂಟಿಹೊಳೆ
ಶ್ರೀಕ್ಷೇತ್ರ ಸಿಗಂದೂರಿನಲ್ಲಿ ಬಳಕೆಯಲ್ಲಿದ್ದ ಬಾರ್ಜ್ ಸೇವೆಯನ್ನು ಗಂಗೊಳ್ಳಿ-ಕುಂದಾಪುರ ನಡುವಿನ ಸಂಪರ್ಕಕ್ಕೆ ಬಳಸುವ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಸಿಗಂದೂರು ಸಂಪರ್ಕಕ್ಕೆ ಬಳಸುತ್ತಿದ್ದ ಬಾರ್ಜ್ ಸೇವೆ ನೂತನ ಸೇತುವೆ ನಿರ್ಮಾಣದ ನಂತರ ನಿಲ್ಲಿಸಲಾ ಗಿದೆ. ಆ ಬಾರ್ಜ್ನ್ನು ಗಂಗೊಳ್ಳಿ- ಕುಂದಾಪುರ ನಡುವೆ ಸಂಪರ್ಕ ಕಲ್ಪಿಸಲು ಪಂಚಗಂಗಾವಳ್ಳಿ ನದಿಗೆ ಒದಗಿಸಬೇಕು ಎಂದು ಸ್ಥಳೀಯರು ಹಲವು ರೀತಿಯಲ್ಲಿ ಆಗ್ರಹ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಇದಕ್ಕೆ
ವಿದ್ಯಾರ್ಥಿ ನಿಲಯಗಳಲ್ಲಿ ಅಶಿಸ್ತಿಗೆ ಅವಕಾಶ ನೀಡಬಾರದು : ಗಂಟಿಹೊಳೆ ಸೂಚನೆ
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯ ಒದಗಿಸಲಾಗುತ್ತಿದೆ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದರ ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಅಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಶಾಸಕ ಗಂಟಿಹೊಳೆ ಅವರು ಸೂಚನೆ ನೀಡಿದರು. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ
ಪ್ರತೀ ವಿದ್ಯಾರ್ಥಿಗಳ ಕಾಳಜಿ ವಹಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಗಂಟಿಹೊಳೆ ಕರೆ
ಪ್ರೌಢ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಬಹು ಮುಖ್ಯ ಘಟ್ಟ ಸರಕಾರಿ ಅಥವಾ ಖಾಸಗಿ ವ್ಯವಸ್ಥೆಯಲ್ಲಿರುವ ಶಿಕ್ಷಣ ಸಂಸ್ಥೆಗಳು ಪ್ರತಿಯೊಂದು ವಿದ್ಯಾರ್ಥಿಗಳ ಕಾಳಜಿ ವಹಿಸುವುದರ ಜೊತೆಗೆ ಆಯಾ ಸಂಸ್ಥೆಗಳಲ್ಲಿ ಶಿಕ್ಷಣದ ಪ್ರಾರಂಭದಿಂದ ಹಿಡಿದು ಅಂತ್ಯದವರೆಗೂ ವಿದ್ಯಾರ್ಥಿಗಳಿಗೆ ಭೌದ್ದಿಕ ಸಾಮರ್ಥ್ಯ ತುಂಬಿ ಅವರುಗಳ ಶೈಕ್ಷಣಿಕ ಗುರಿಯ ದಡ ತಲುಪಿಸುವ ನೈತಿಕತೆಯನ್ನು ಪ್ರದರ್ಶಿಸಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕರೆ ನೀಡಿದರು. ಶಾಸಕರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲೆಗಳ
ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ
ಸರ್ಕಾರದ ಆರೋಗ್ಯ ಇಲಾಖೆಗಳ ನಿಯಮಗಳ ನಿರ್ಬಂಧನೆಗಳು ಗ್ರಾಮೀಣ ಭಾಗದ ಆರೋಗ್ಯ ಸಮಸ್ಯೆಗಳು ಇದೆಲ್ಲದರ ಪರಿಣಾಮವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಇರುವ ಹಲವಾರು ಡಯಾಲಿಸಿಸ್ ಬಡ ರೋಗಿಗಳಿಗೆ ಬೈಂದೂರು ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ತುರ್ತು ಚಿಕಿತ್ಸೆ ಮತ್ತು ವಿಶೇಷ ಆರೋಗ್ಯ ಸೇವೆಗಳ ಆರಂಭದ ಮೂಲಕ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಮೃದ್ಧ ಬೈಂದೂರು ಜನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ ಹೇಳಿದ್ದಾರೆ. ಶನಿವಾರ ಅಂಜಲಿ ಆಸ್ಪತ್ರೆಯಲ್ಲಿ ಹೊಸ ಅರೋಗ್ಯ ಸೇವೆಗಳನ್ನು
ಸ.ಹಿ.ಪ್ರಾ.ಶಾಲೆ ಗಂಗಾನಾಡು ಎರಡು ತರಗತಿ ಕೋಣೆಗೆ ಗುದ್ದಲಿ ಪೂಜೆ
300 ಟ್ರೀಸ್ ಸಮೃದ್ಧ ಬೈಂದೂರು ಯೋಜನೆ ಅಡಿಯಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್ ಉಡುಪಿ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಶಾಲೆಗೆ ಎರಡು ಹೊಸ ಕಟ್ಟಡಗಳ ಗುದ್ದಲಿ ಪೂಜೆ ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ರೋಬೋಸಾಫ್ಟ್ ಟೆಕ್ನಾಲಜಿಸ್ ನ ಗುಣಮಟ್ಟ ನಿರ್ವಹಣಾ ವಿಭಾಗದ ಉಪಾಧ್ಯಕ್ಷ ಶ್ರೀಧರನ್ ಕೇಶವನ್, ಜಿ ಎ ಡಿ ಕಾರ್ಯಾಚರಣೆ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಗೋಪಾಲಕೃಷ್ಣ ಕಾಮತ್,
ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿ ಇಲ್ಲವೇ ಯೋಜನೆಯನ್ನೇ ನಿಲ್ಲಿಸಿ : ಗಂಟಿಹೊಳೆ ಆಕ್ರೋಶ
ತಾಲೂಕು ಕಚೇರಿಯಲ್ಲಿ ನಡೆದ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನಗೊಳ್ಳುವ ಸಾಲ ಸೌಲಭ್ಯ ಯೋಜನೆಗಳು ಅರ್ಹತೆ
