News & Events
ಚಿತ್ರಕೂಟ ಆಯುರ್ವೇದ ಸಂಸ್ಥೆ ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ
ಕುಂದಾಪುರ: ಚಿತ್ರಕೂಟ ಆಯುರ್ವೇದ ಸಂಸ್ಥೆಯನ್ನು ಆರಂಭಿಸುವ ಮೂಲಕ ಆಲೂರಿಗೆ ಡಾ| ಬಾಯರಿ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಇದರ ಯಶಸ್ಸು ಕೇವಲ ಅವರಿಗೆ ಮಾತ್ರವಲ್ಲ, ಇಡೀ ಊರಿಗೆ ಸಲ್ಲುತ್ತದೆ. ಈ ಪುಟ್ಟ ಊರಿಗೆ ಚಿಕಿತ್ಸೆಗಾಗಿ ವಿದೇಶಿಗರು ಕೂಡ ಬರುತ್ತಿರುವುದು ಹೆಮ್ಮೆಯ ವಿಚಾರ. ಸಂಸ್ಥೆ ಇನ್ನಷ್ಟು ಪ್ರಗತಿ ಕಾಣಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಗುರುವಾರ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪಾರ್ಶ್ವ ವಾಯು ಪುನರ್ವಸತಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು. ಸಮ್ಮಾನ
ಕ್ಷೇತ್ರದಲ್ಲಿ ಒಂದಾದರೂ ಗೋ ಶಾಲೆ ನಿರ್ಮಾಣ ಅತಿ ಶೀಘ್ರ ಆಗಬೇಕು
ಗೋಮಾಳ ಜಾಗ ಸರ್ವೇ ಪೂರ್ಣಗೊಳಿಸಿದ ಗ್ರಾ.ಪಂ. ಪಿಡಿಒಗಳ ಜತೆ ಶಾಸಕ ಗುರುರಾಜ್ ಗಂಟಿಹೊಳೆ ಸಭೆ ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು. ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ ಜೊತೆ ಸಭೆ ನಡೆಸಿದ ಶಾಸಕರು, ಸುಮಾರು 80 ಪ್ರತಿಶತ ತಯಾರಿಯಲ್ಲಿರುವ ನಾಡ ಗೋಮಾಳದ ಬಗ್ಗೆ ಮೊದಲು ಚರ್ಚಿಸಿದರು. ನಾಡದಲ್ಲಿ ನೀರಿಗಾಗಿ
ಬಿಜೂರಿನಲ್ಲಿ ಗಮನ ಸೆಳೆದ ಗ್ರಾಮ ಸಂವಾದ
ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ, ಶಾಲಾ ಮಕ್ಕಳಿಗೆ ಕಾಲುಸಂಕಗಳು, ತೆರೆದ ಅಪಾಯಕಾರಿ ಚರಂಡಿ, ದಾರಿದೀಪದ ಸಮಸ್ಯೆ, ಗ್ರಾಮಕರಣಿಕರ ಅಲಭ್ಯತೆ, ಹೀಗೇ ಹಲವು ಸಮಸ್ಯೆಗಳನ್ನು ಶಾಸಕರಿಗೆ ಮನವರಿಕೆ ಮಾಡಿದರು. ಬಿಜೂರು ಗ್ರಾಮದಲ್ಲಿ ಜೆಜೆಎಂ ಪೈಪ್ ಲೈನ್ ಕಾಮಗಾರಿ ಪೂರ್ಣವಾಗಿಲ್ಲ ಎನ್ನುವುದನ್ನು ಬಿಜೂರು
ಅಂತಾರಾಷ್ಟ್ರೀಯ ಉದ್ಯೋಗ ಮೇಳ ಯಶಸ್ಸಿಗೆ ಸಭೆ
ಉಪ್ಪುಂದ: ಇದೇ ಮೊದಲ ಬಾರಿಗೆ ಬೈಂದೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗ ಮೇಳದ ಯಶಸ್ವಿಗಾಗಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ಕಾರ್ಯಕರ್ತದಲ್ಲಿ ಪ್ರಮುಖರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಬೈಂದೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಅರ್ಹ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಮಾಡಬೇಕು. ವಿಶೇಷವಾಗಿ ಬೈಂದೂರು ಕ್ಷೇತ್ರದ ಪ್ರತಿಬೂತ್ ನ ಪ್ರತಿ ಮನೆಗೂ ಉದ್ಯೋಗ ಮೇಳದ ಮಾಹಿತಿ ತಲುಪಿಸುವ ಕಾರ್ಯ ಆಗಬೇಕು. ವಿದೇಶಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶ ಮತ್ತು ಅದಕ್ಕೆ ಉಚಿತವಾಗಿ ನೀಡುವ ತರಬೇತಿ,
ವಾರಾಹಿ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು
ಬೈಂದೂರು ಕ್ಷೇತ್ರಕ್ಕೆ ನೀರುಣಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ಬೈಂದೂರು: ವಾರಾಹಿ ಯೋಜನೆಗೆ ಸಂಬಂಧಿಸಿದಂತೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಆಗಲಿರುವ ಉಪಯೋಗ ಮತ್ತು ಯೋಜನೆ ಬೈಂದೂರಿನ ಗ್ರಾಮಗಳಿಗೆ ಸಮರ್ಪಕವಾಗಿ ಬಾರದೇ ಇರುವ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬುಧವಾರ ವಾರಾಹಿ ಕಚೇರಿಯಲ್ಲಿ ನಡೆದ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಬೈಂದೂರು ಕ್ಷೇತ್ರದ ಗ್ರಾಮಗಳಿಗೆ ವಾರಾಹಿ ನೀರುಣಿಸಲು ಇರುವ ಯೋಜನೆಗಳ ಬಗ್ಗೆ ಶಾಸಕರು ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದಾಗ,
ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ – ವಿದೇಶದಲ್ಲಿ ಉದ್ಯೋಗಾವಕಾಶ
ಬೈಂದೂರು : ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಲಿದ್ದು, ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ಬಂದಿದೆ. ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ನಡೆಯಲಿದೆ. ಇದೊಂದು
ಕಾಂಗ್ರೆಸ್ಗೆ ಬೈಂದೂರಿನ ಅಭಿವೃದ್ಧಿಯೇ ಬೇಕಾಗಿಲ್ಲ – ಶಾಸಕ ಗಂಟಿಹೊಳೆ
ಬೈಂದೂರಿನ ಅಭಿವೃದ್ಧಿಗೆ ಪದೇಪದೇ ಅಡ್ಡಗಾಲು ಹಾಕುತ್ತಿರುವ ಕಾಂಗ್ರೆಸ್ ಶಾಸಕರು ಅಧಿಕಾರಿಗಳ ಸಭೆಯೇ ನಡೆಸಬಾರದು ಎಂಬ ಹಠಕ್ಕೆ ಕಾಂಗ್ರೆಸ್ ಬಿದ್ದಿರುವುದು ಸ್ಪಷ್ಟ ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ವರ್ತನೆಗೆ ಶಾಸಕರ ಆಕ್ರೋಶ ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಾರದು ಮತ್ತು ಶಾಸಕರು ಅಧಿಕಾರಿಗಳ ಸಭೆ ನಡೆಸಬಾರದು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ವಿನಾಕಾರಣ ಹಲವು ರೀತಿಯಲ್ಲಿ ಸಮಸ್ಯೆ ನೀಡುತ್ತಿದ್ದಾರೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಯಾರೇ ಅಡ್ಡಿ ಬಂದರೂ ಅದನ್ನು ಸಹಿಸಲು ಸಾಧ್ಯವೇ ಇಲ್ಲ
“ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ” – ಗುರುರಾಜ್ ಗಂಟಿಹೊಳೆ
ಮೈಸೂರು: ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ತಮ್ಮ ಮೈಸೂರು ಚಲೋ ಯಾತ್ರೆಯ ಅನುಭವನ್ನು “ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ” ಎನ್ನುವ ಶೀರ್ಷಿಕೆಯ ಮುಖಾಂತರ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ. ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ. #MysuruChalo #ScamSarkara #ಪಾದಯಾತ್ರೆ pic.twitter.com/wcdVsPK1j5 — Gururaj Gantihole (@gantihole) August 10, 2024 ಶಾಸಕ ಗುರುರಾಜ್ ಗಂಟಿಹೊಳೆ ಸರಳತೆಗೆ ಹೆಸರಾಗಿರುವ ಉಡುಪಿ ಜಿಲ್ಲೆಯ ಶಾಸಕ. ಪಕ್ಷದ ನಾಯಕರು-ಸೇನಾನಿಗಳ ಜೊತೆ ಗಂಟಿಹೊಳೆ ಮೈಸೂರು ಚಲೋ ಪಾದಯಾತ್ರೆಯಲ್ಲಿ
ಬೈಂದೂರಿನ ಸ್ವಾಭಿಮಾನ ತಗ್ಗಿಸುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ
ಕೋರ್ಟ್ ಬೇರೆಡೆ ವರ್ಗಾಯಿಸಲು ಬಿಡುವುದಿಲ್ಲ. ಇದಕ್ಕಾಗಿ ಹೋರಾಟಕ್ಕೂ ಸಿದ್ಧ: ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರಿನ ಸ್ವಾಭಿಮಾನ ತಗ್ಗಿಸುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ಘಟನೆಗಳು ನಡೆದಲ್ಲಿ ಬೀದಿಗಿಳಿದು ಹೋರಾಟಕ್ಕೂ ಸಿದ್ಧ. ಅಭಿವೃದ್ಧಿಯಲ್ಲಿ ಬೈಂದೂರು ಸದಾ ಮುಂದಿರಬೇಕು ಎಂಬುದು ನಮ್ಮ ಆಶಯ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಬೈಂದೂರು ಕೋರ್ಟ್ ಕಟ್ಟಡ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರೊಂದಿಗೂ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಬೈಂದೂರು ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ
ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರಿಗೆ ಮನವಿ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವಲ್ಲಿ ಯಶಸ್ವಿಯಾದ ಸಂಸದ ಬಿ.ವೈ.ರಾಘವೇಂದ್ರ ಈಗ ತಮ್ಮ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದಾರೆ. ಹೊಸದಿಲ್ಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡುರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರು ಮಾಡಲು ಬುಧವಾರ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಒಡಗೂಡಿ ಮನವಿ ಸಲ್ಲಿಸಿದರು. ಶಿವಮೊಗ್ಗ
